Govt schemes, Required documents for all types of certificate,


Sir Kannadiga

ಪ್ರತಿ ವರ್ಷ ಹಿಂದುಳಿದ ವರ್ಗಗಳ 2.50 ಲಕ್ಷ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಹಾಸ್ಟೆಲ್ ಗಳ ಮೂಲಸೌಕರ್ಯ, ಪುಸ್ತಕ, ಗ್ರಂಥಾಲಯಗಳಿಗೂ ಆದ್ಯತೆ ನೀಡಲಾಗಿದೆ. ಉತ್ತಮ ಗುಣಮಟ್ಟದ ಆಹಾರ, ಹಾಸ್ಟೆಲ್ ಗಳ ನವೀಕರಣ, ಪುಸ್ತಕ ವಿತರಣೆ, ಗ್ರಂಥಾಲಯದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ @sstangadagi ಅವರು ತಿಳಿಸಿದ್ದಾರೆ.

1 year ago | [YT] | 0

Sir Kannadiga

371(ಜೆ ) ಕಾಯ್ದೆಯನ್ವಯ ರಾಜ್ಯದಾದ್ಯಂತ ಸರ್ಕಾರಿ ನೇಮಕಾತಿಯಲ್ಲಿ ರಾಜ್ಯಮಟ್ಟದ ಸ್ಥಳೀಯ ವೃಂದದ ನೇರ ನೇಮಕಾತಿಯಲ್ಲಿ 9695 ಹುದ್ದೆಗಳನ್ನು ಗುರುತಿಸಲಾಗಿದ್ದು, ಈ ಪೈಕಿ 5977 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ.

371(ಜೆ ) ಅಡಿ ವಿವಿಧ ನೇಮಕಾತಿ ಸಂಸ್ಥೆಗಳಲ್ಲಿ  1,658 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದ್ದು, ಇನ್ನು 2,035 ಹುದ್ದೆಗಳ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕಿದೆ. ಈಗಾಗಲೇ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಂತೆ ಕ್ರಮವಹಿಸಲು ಎಲ್ಲಾ ಇಲಾಖೆಗಳಿಗೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸೂಚನೆ ನೀಡಲಾಗಿದೆ.

371 (ಜೆ) ಅಡಿಯಲ್ಲಿ ನೇಮಕವಾಗಿರುವ ನೌಕರರು ತೊಂದರೆ ಅನುಭವಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಸದರಿ ಅಂಶಗಳನ್ನು ಆದ್ಯತೆ ಮೇಲೆ ಚರ್ಚಿಸಿ, ಸಂಬಂಧಪಟ್ಟ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡುವುದರ ಮೂಲಕ ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ.

- ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ @dsudhakar2727 ಅವರ ಉತ್ತರ

1 year ago | [YT] | 0

Sir Kannadiga

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾದ “ಮುಖ್ಯ ಆಯುಕ್ತರ ನಡೆ ವಲಯದ ಕಡೆ” ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಖುದ್ದಾಗಿ ಸ್ವೀಕರಿಸಿದರು. ಇದೆ ವೇಳೆ ಸಾರ್ವಜನಿಕರೊಬ್ಬರು, ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಕೆಲವೆಡೆ ಸಾರ್ವಜನಿಕ ಶೌಚಾಲಯವನ್ನು ನಿರ್ಮಾಣ ಮಾಡಿಕೊಡಲು ಮನವಿ ಮಾಡಿದರು.

ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ 200 ಹೈಟೆಕ್ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಾಣ ಮಾಡಲು ಕ್ರಮವಹಿಸಲಾಗುತ್ತಿದೆ. ಈ ಸಂಬಂಧ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಖಾಲಿ ಜಾಗ/ಸಾರ್ವಜನಿಕ ಸ್ಥಳಗಳನ್ನು ಗುರುತಿಸಬೇಕು. ಆ ಬಳಿಕ ಟೆಂಡರ್ ಕರೆದು ಕಾಲಮಿತಿಯೊಳಗಾಗಿ ಶೌಚಾಲಯಗಳನ್ನು ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

1 year ago | [YT] | 0

Sir Kannadiga

#PGMedical 2ನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. 2,405 ಸೀಟು ಹಂಚಿಕೆ ಆಗಿವೆ. ದಾಖಲೆ ಸಲ್ಲಿಸಿದ್ದ 4,651 ಮಂದುಯನ್ನು ಮಾತ್ರ ಸೀಟು ಹಂಚಿಕೆಗೆ ಪರಿಗಣಿಸಲಾಗಿದೆ. ಡಿ.26ರೊಳಗೆ ಶುಲ್ಕ ಪಾವತಿಸಿ, ಡಿ.27ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳುವುದು.

1 year ago | [YT] | 0

Sir Kannadiga

Footpath encroachment removal drive taken at ward No:-196 Gavi Gangadhareshwara
Doddaganapthi sub division, South zone.

1 year ago | [YT] | 0

Sir Kannadiga

Footpath encroachment removal drive taken at Hegnahalli sub division, #Dasharhalli zone.

1 year ago | [YT] | 0

Sir Kannadiga

As 2024 draws to a close, we reflect on a year of innovation & progress from Google Research, which has enabled us to help address some of the greatest challenges & questions today, covering topics from quantum computing to flood forecasting. Read more at goo.gle/3ZIBqrf

1 year ago | [YT] | 0

Sir Kannadiga

ಅವಶ್ಯಕತೆಗಳ ಬಗ್ಗೆ ಅಧಿಕಾರಿಗಳಿಗೆ ಅಹವಾಲು ಸಲ್ಲಿಸಿದರು. ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಎಲ್ಲಾ ಅಹವಾಲುಗಳನ್ನು ಆಲಿಸಿ, ಪರಿಹಾರ ಕೈಗೊಳ್ಳುವುದಾಗಿ ಸಭೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರು ಮತ್ತು ಸಿಬ್ಬಂದಿಗಳು, ಇತರೆ ಇಲಾಖೆಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. (2/2)

1 year ago | [YT] | 0